Tuesday, May 21, 2019

Nadedu Baaryya Bhava Kadalige Khumbha Sambhava

ನಡೆದು ಬಾರಯ್ಯ ಭವ ಕಡಲಿಗೆ ಕುಂಭಸಂಭವ||
ಸಡಗರದಿಂದ ಮೆಲ್ಲಡಿಯನಿಡುತ ಬೇಗ
ಎಡಬಲದಲಿ ನಿನ್ನ ಮಡದಿಯರೊಡಗೂಡಿ
ತಡಮಾಡದೆ ಬಾ ಮ್ರಡಸಖ ವೆಂಕಟ …ನಡೆದು ||

ವಿಜಯದಶಮಿ ಆಶ್ವಿಜಶುಧ್ಧ ಮಾಸದಲ್ಲಿ
ನಿಜರಥಾರೂಢನಾಗಿ, ಸುಜನರಿಂದ ಒಪ್ಪುತ
ಗಜಸಿಂಹ ,ಮಯೂರ, ಧ್ವಿಜಸಿಂಗ ಸಾರಂಗ
ಮಜಬಾಪುರೆ ಎನಲು ತ್ರಿಜಗವು ತಲೆದೂಗೇ
ಅಜನು ಸ್ತುತಿಯ ಮಾಡೆ ರುಜಗಣಾಧಿಪ ಪಡೆ
ಗಜಮುಖನಯ್ಯ ನಿಜಾನಂದದಲಾಡೆ
ಭುಜಗಶ್ರೇಷ್ಠ ಧ್ವಿಜರಾಜರು ಜಯವೆನ್ನೆ
ಕುಜನರೆದೆಯ ಮುಟ್ಟಿ ರಜತಮ ಕಲೆಯುತ ನಡೆದು….ನಡೆದು||

ದಕ್ಷಿಣ ಧಿಕ್ಕಿನಲ್ಲಿ ,ರಾಕ್ಷಸರೆದುರಾಗಿ ,
ಒಂದಕ್ಷೋಹಿಣಿ ಬಲ ,ನಿನ್ನ ಅಪೇಕ್ಷೆ ಮಾಡುತಲಿರೆ
ಪಕ್ಷಿವಾಹನನೆಣಿಸಿ ಅ ಕ್ಷಣೊದೊಲು ಖಳರ
ಶಿಕ್ಷಿಸಿ, ಸುಜನರ ರಕ್ಷಿಸಿ ಮೆರೆದಯ್ಯಾ
ತಕ್ಷಕ ನರನನು ಭಕ್ಷಿಸಬರುತಿರೆ ಈಕ್ಷಿಸಿ ತಕ್ಷಣ
ರಥನೆಲಕ್ಕೊತ್ತಿದೆ, ಲಕ್ಷೀಶನೆ ಅಕ್ಷಯ ಫಲದಾಯಕ
ಕುಕ್ಷಿಯೊಳಗೆ ಜಗರಕ್ಷಿಪ ವಿಶ್ವನೇ…..||ನಡೆದು ಬಾರಯ್ಯ||

ಮನಕೆ ಬಾರಯ್ಯ , ಸುಧಾಮನ ಸಖಹರಿಯೆ
ಸೋಮನ ಧರಿಸಿದವನೆ ,ಮನ ಕುಮುದಕೆ
ಚಂದ್ರಮನೆ ಕೇಳು ಎನ್ನ ದುಮ್ಮನವನೆ ಪರಿಹರಿಸಿ
ಒಮ್ಮನ ಕೊಡು ಅಹಿಗಿರಿ ತಿಮ್ಮನೆ ಕೇಳೊ ಬಿನ್ನಪಾ
ಕೊಂಬು ಕಹಳೆಗಳು ಬೊಂಬೋರಿಡುತಿರೆ
ತುಂಬುರು ನಾರದ ಇಂಪಾಗಿ ಪಾಡಲು
ಅಂಭರದಲಿ ವಾದನ ತುಂಬಿ ಧಿಮಿಕ್ಕೆನ್ನೆ
ಸಂಭ್ರಮದಲಿ ಬಾರೊ ಶಂಭು ವಂದಿತನೆ ನಡೆದೂ….||

ಪರಿಪರಿ ಬಗೆಯಿಂದ ಕರವ ಮುಗಿದು ಸ್ತುತಿಸಿ
ಕರೆದರೆ ಬಾರದೆ ಗರ್ವವು ಯಾಕೊ
ಕರಿಯ ಮೊರೆಯ ಕೇಳಿ, ಸಿರಿಗೆ ಹೇಳದೆ ಬಂದೆ
ಕರಿರಾಜ ಅವನಿನ್ನ ಹಿರಿಯಪ್ಪನ ಮಗನೇನೊ
ಶರಣಾಗತರಕ್ಷಕ ಮಣಿ ಎಂಬುವ
ಬಿರುದು ಬೇಕಾದರೆ ,ಸರಸರ ಬಾರಯ್ಯ,
ಗರುಡ ಗಮನ ಗೋಪಾಲ ವಿಠ್ಠಲರಾಯ
ಕರುವಿನಮೊರೆಗಾವು ನೆರೆದಂತೆ ಪೊರೆಯೊ ||

No comments:

Post a Comment